ನವದೆಹಲಿ (ಪಿಟಿಐ): ತಮಿಳುನಾಡಿಗೆ ನಿತ್ಯವೂ 10,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ್ಕೆ ಬುಧವಾರ ನಿರ್ದೇಶನ ನೀಡಿದೆ.
ಅಲ್ಲದೇ, ಉಭಯ ರಾಜ್ಯಗಳಿಗೆ ಅಗತ್ಯವಿರುವ ನೀರಿನ ಪ್ರಮಾಣವನ್ನು ಒಂದೆರಡು ದಿನಗಳಲ್ಲಿ ನಿರ್ಧರಿಸುವಂತೆ ಕಾವೇರಿ ನಿರ್ವಹಣಾ ಸಮಿತಿಗೆ (ಸಿಎಂಸಿ) ಸೂಚನೆ ನೀಡಿದೆ.
ನೀರಿನ ಕೊರತೆಯಿಂದ `ಸಾಂಬಾ' ಬೆಳೆ ಒಣಗುತ್ತಿದೆ. ಹಾಗಾಗಿ ಕರ್ನಾಟಕದಿಂದ ಹೆಚ್ಚುವರಿಯಾಗಿ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಮನವಿಗೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶ ನೀಡಿದೆ.