ಹರಪನಹಳ್ಳಿ: ಮೊರಾರ್ಜಿದೇಸಾಯಿ ವಸತಿಶಾಲೆಯಲ್ಲಿನ ಕೆಲ ಶಿಕ್ಷಕರನ್ನು ಏಕಾಏಕಿ ವರ್ಗಾವಣೆ ಮಾಡಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(ಕ್ರೈಸ್) ನಿರ್ವಾಹಕ ನಿರ್ದೇಶಕರ ಕ್ರಮ ವಿರೋಧಿಸಿ ತಾಲ್ಲೂಕಿನ ಕನ್ನಾಯಕನಹಳ್ಳಿ ವಸತಿಶಾಲೆ ವಿದ್ಯಾರ್ಥಿಗಳು ಗುರುವಾರ ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದರು.
ಶಾಲೆ ಆರಂಭವಾದಾಗಿನಿಂದ ಹೊರ ಸಂಪನ್ಮೂಲದ ಶಿಕ್ಷಕರ ಉಸ್ತುವಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಆದರೆ, ಕಳೆದವರ್ಷ `ಕ್ರೈಸ್' ನೇರ ನೇಮಕಾತಿ ಮೂಲಕ ಶಾಲೆಗೆ ಕಾಯಂ ಶಿಕ್ಷಕರ ಹುದ್ದೆಗಳನ್ನು ಭರ್ತಿಮಾಡಿದೆ. ನೇರ ನೇಮಕಾತಿ ಮೂಲಕ ಆಯ್ಕೆಯಾದ ಶಿಕ್ಷಕರು ನಮಗೆ ಅತ್ಯುತ್ತಮವಾದ ಪಾಠ, ಪ್ರವಚನಗಳನ್ನು ಬೋಧಿಸುತ್ತಿದ್ದರು.