ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಳ ಮಟ್ಟದಿಂದ ಪಕ್ಷ ಬಲಪಡಿಸಲು ಕರೆ

Last Updated 7 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕೆಂಗೇರಿ: ಬೇರು ಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸಲು ಮತ್ತು ಬೆಳೆಸಲು ಸಹಕರಿಸಬೇಕೆಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.ಯಶವಂತಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಅಪ್ಪ- ಮಕ್ಕಳ ಪಕ್ಷವೆಂದು ಟೀಕಿಸುವವರಿಗೆ ಪಾಠ ಕಲಿಸುವ ನಿಟ್ಟಿನಲ್ಲಿ ಎಲ್ಲಾ ವರ್ಗದ ಮುಖಂಡರ ಸಭೆ ಕರೆದು ಕಾರ್ಯಕರ್ತರು ಸೂಚಿಸಿದ ಸರ್ವಸಮ್ಮತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು~ ಎಂದು ಅವರು ಹೇಳಿದರು.

`ಇದರಿಂದ ಟಿಕೆಟ್‌ಗಾಗಿ ಕಚ್ಚಾಡುವವರು ಮೊದಲು ಕಾರ್ಯಕರ್ತರು ಮತ್ತು ಮತದಾರರ ಮನಗೆಲ್ಲಲು ಪ್ರಯತ್ನಿಸಬೇಕು. ಜನರೇ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಟಿಕೆಟ್‌ಗಾಗಿ ಕಚ್ಚಾಡಿಕೊಂಡು ಪಕ್ಷದಲ್ಲಿ ಗೊಂದಲಗಳನ್ನು ಉಂಟು ಮಾಡುವುದರಿಂದ ಕಾರ್ಯಕರ್ತರಿಗೆ ಬೇಸರವಾಗುತ್ತದೆ. ಪಕ್ಷದ ಹಿನ್ನಡೆಗೂ ಕಾರಣವಾಗುತ್ತದೆ~ ಎಂದು ಅವರು ಅತಂಕ ವ್ಯಕ್ತಪಡಿಸಿದರು.

ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿರೆಡ್ಡಿ, ಕ್ಷೇತ್ರ ಘಟಕದ ಅಧ್ಯಕ್ಷ ಪಂಚಲಿಂಗಯ್ಯ, ಪಾಲಿಕೆ ಸದಸ್ಯ ಹನುಮಂತೇಗೌಡ, ಜೆಡಿಎಸ್ ಮುಖಂಡ ಜವರಾಯಿಗೌಡ,  ನಗರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನ್ನಪೂರ್ಣ ಕೃಷ್ಣಮೂರ್ತಿ, ಸರ್ವಮಂಗಳ ಕೃಷ್ಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT