ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ ಕೊಂದು, ಮಗ ಆತ್ಮಹತ್ಯೆ

Last Updated 24 ಸೆಪ್ಟೆಂಬರ್ 2011, 6:50 IST
ಅಕ್ಷರ ಗಾತ್ರ

ಬಂಟ್ವಾಳ: ಸಮೀಪದ ಕುಳ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಶುಕ್ರವಾರ ತಡ ರಾತ್ರಿ ಮಾನಸಿಕ ಅಸ್ವಸ್ಥನಾದ ಕೃಷ್ಣಪ್ಪ (30)  ತನ್ನ ತಾಯಿ ಭವಾನಿ (60)ಗೆ ಸೀಮೆಎಣ್ಣೆ ಸುರಿದ್ದು ಬೆಂಕಿ ಹಚ್ಚಿ ಕೊಲೆ ಮಾಡಿ, ತಾನೂ  ಅದೇ ಬಗೆಯಲ್ಲಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸ್ಥಳೀಯರ ಪ್ರಕಾರ ಕಳೆದ ನಾಲ್ಕು ತಿಂಗಳಿನಿಂದ ಕೃಷ್ಣಪ್ಪ ಹೆಂಡತಿಯನ್ನು ಬಿಟ್ಟು ತಾಯಿಯೊಂದಿಗೆ ಇಲ್ಲಿ ವಾಸವಾಗಿದ್ದನು. ಮಾನಸಿಕ ರೋಗಿಯಾದ ಇತನು ಕೂಲಿ ಕಾರ್ಮಿಕನಾಗಿದ್ದು, ಕುಡಿತದ ಚಟಕ್ಕೆ ದಾಸನಾಗಿದ್ದನು. ತಾಯಿ ಭವಾನಿ ಅಂಗವಿಕಲೆಯಾಗಿದ್ದು, ಹಲವು ವರ್ಷಗಳಿಂದ ಅನಾರೋಗ್ಯದಿಂದ ನರಳುತ್ತಿದ್ದಳು.

ತಾಯಿಯ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುವುದನ್ನು ಕಂಡ ಆತನು ತಾಯಿ ಮಂಚದಲ್ಲಿ ಮಲಗಿರುವಾಗಲೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿ, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT