ಇಸ್ಲಾಮಾಬಾದ್ (ಪಿಟಿಐ): ಪೇಶಾವರ ಚರ್ಚ್ ಮೇಲಿನ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಪ್ ತಾಲಿಬಾನ್ನೊಂದಿಗೆ ಶಾಂತಿ ಮಾತುಕತೆ ನಡೆಸುವ ಸುಳಿವು ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದೇಶದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಈ ದಾಳಿ ಖಂಡನೀಯ ಎಂದರು. ಮುಂದಿನ ದಿನಗಳಲ್ಲಿ ತಾಲಿಬಾನ್ನೊಂದಿಗೆ ಶಾಂತಿಯುತ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಈ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಷರೀಪ್ ತಿಳಿಸಿದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ ಬಳಿಕ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗುವುದು ಎಂದು ಷರೀಪ್ ತಿಳಿಸಿದರು.