ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಆಡಳಿತದ ವಿರುದ್ಧ ಧರಣಿ

Last Updated 7 ಜುಲೈ 2012, 8:30 IST
ಅಕ್ಷರ ಗಾತ್ರ

ಮುಳಬಾಗಲು: ನಂಗಲಿ, ಮುಷ್ಟೂರು, ನೆಗವಾರ ಸೇರಿದಂತೆ ತಾಲ್ಲೂಕಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಜಮೀನುಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ, ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವುದು ಸೇರಿದಂತೆ 15 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಪಟ್ಟಣದ ಮಿನಿವಿಧಾನಸೌಧದ ಎದುರು ದಲಿತ ಸಂಘರ್ಷ ಸಮಿತಿ, ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ, ರೈತ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ದೊಡ್ಡಕೆರೆ ನಂಗಲಿ ಕೆರೆಯಲ್ಲಿ ಮರಳು ಗಣಿಗಾರಿಕೆ ನಿಲ್ಲಿಸಬೇಕು. ದಲಿತರ ಕುಂದುಕೊರತೆ ಸಭೆ ನಡೆಸಬೇಕು. ಜಮ್ಮನಹಳ್ಳಿ ಗ್ರಾಮದ ಸರ್ವೆ ನಂಬರ್ 103ರ 36 ಎಕರೆ ಭೂಮಾಫಿಯ ವಶವಾಗಿರುವುದನ್ನು ತೆರವುಗೊಳಿಸಿ ಜಮೀನು ರಹಿತ ಬಡ ದಲಿತರಿಗೆ ಹಂಚಬೇಕು.

ಟೆಂಡರ್ ಮೂಲಕ ನಡೆಯುತ್ತಿರುವ ನೆಮ್ಮದಿ ಕೇಂದ್ರಗಳಿಂದ ಸಾರ್ವಜನಿಕರಿಗೆ ನೆಮ್ಮದಿ ಇಲ್ಲವಾಗಿರುವ ಕಾರಣ ನೆಮ್ಮದಿ ಕೇಂದ್ರಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ದಸಸಂ ಸಂಚಾಲಕ ಕೀಲುಹೊಳಲಿ ಸತೀಶ್, ಎಂ.ಸಿ.ಮಂಜುನಾಥ್, ಜಗದೀಶ್, ಶ್ರೀರಾಮ್, ಬಂಗಾವಾದಿ ಶ್ರೀನಿವಾಸ್, ಪಿ.ಎಲ್.ಅಮತಯ್ಯ, ವೆಂಕಟರಾಮಪ್ಪ, ಕಲಾಮಂಡಳಿ ನರಸಿಂಹ ಇತರರು ಭಾಗವಹಿಸಿದ್ದರು. ನಂತರ ತಹಶೀಲ್ದಾರ್ ಪಿ.ಜಯಮಾಧವ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT