ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆ: ಮಾಹಿತಿ ನೀಡಲು ಸೂಚನೆ

Last Updated 14 ಆಗಸ್ಟ್ 2012, 8:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: `ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯಾವುದೇ ಯೋಜನೆಯಾಗಿದ್ದರೂ ಅದರ ಕುರಿತು ಜನರಿಗೆ ಮಾಹಿತಿ ಒದಗಿಸುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯ~  ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಸೂಚಿಸಿದರು.

 ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ಸರ್ಕಾರಿ ಯೋಜನೆಗಳು ಜನರಿಗೆ ದೊರೆಯಬೇಕೆ ಹೊರತು ವ್ಯರ್ಥವಾಗಬಾರದು~ ಎಂದರು.

 `ಯೋಜನೆಗಳ ಬಗ್ಗೆ ಮಾಹಿತಿ ದೊರೆಯದ ಕಾರಣ ಜನಸಾಮಾನ್ಯರಿಗೆ ತಲುಪುತ್ತಿಲ್ಲ. ಆಯಾ ಯೋಜನೆಗಳ ಫಲಾನುಭವಿಗಳಿದ್ದರೂ ಅವರಿಗೆ ಯೋಜನೆಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಖಾರವಾಗಿ ತಿಳಿಸಿದರು.

 ವಿವಿಧ ಇಲಾಖೆಗಳ ಪ್ರಗತಿ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, `ಸುವರ್ಣಭೂಮಿ ಯೋಜನೆ ಸೇರಿದಂತೆ ಸರ್ಕಾರದ ಇತರ ಯೋಜನೆಗಳು ರೈತರಿಗೆ ತುಂಬ ಉಪಯುಕ್ತವಾಗಲಿದ್ದು, ತೋಟಗಾರಿಕೆ, ಕೃಷಿ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಬೇಕು. ಸೌಕರ್ಯ ಕಲ್ಪಿಸಬೇಕು~ ಎಂದರು. 

 ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಕಾರ್ಯನಿರ್ವಹಣಾಧಿಕಾರಿ ಡಾ. ರಾಮಚಂದ್ರರೆಡ್ಡಿ ಮತ್ತು ಸದಸ್ಯ ಕೃಷ್ಣಮೂರ್ತಿ ಸಭೆಯಲ್ಲಿ ಉಪ ಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT