ನವದೆಹಲಿ (ಪಿಟಿಐ): ಕೇರಳದಲ್ಲಿ 1991ರಲ್ಲಿ ತಾಳೆ ಎಣ್ಣೆ ಆಮದಿನಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಮೇಲೆ ನಿಗಾ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾ ಮಾಡಿದೆ.
ಮುಖ್ಯಮಂತ್ರಿ ಉಮ್ಮನ್ ಚಾಂಡಿ ಆ ಸಂದರ್ಭದಲ್ಲಿ ರಾಜ್ಯದ ಹಣಕಾಸು ಸಚಿವರಾಗಿದ್ದರು. ನಿವೃತ್ತ ಐಎಎಸ್ ಅಧಿಕಾರಿ ಆಲ್ಫೋನ್ಸ್ ಕಣ್ಣನ್ಥನಂ ಅರ್ಜಿ ಸಲ್ಲಿಸಿದ್ದರು.