ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಿಗೊಮ್ಮೆ ಸೇವಾ ಮೇಳ ಅಗತ್ಯ

Last Updated 15 ಅಕ್ಟೋಬರ್ 2012, 19:20 IST
ಅಕ್ಷರ ಗಾತ್ರ

ಕೆಂಗೇರಿ: `ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಸೇವಾ ಮೇಳಗಳು ತಿಂಗಳಿಗೊಮ್ಮೆ ನಡೆಯಬೇಕು. ಆಗ ಬಡವರಿಗೆ ಸವಲತ್ತುಗಳನ್ನು ಮನೆಯ ಬಾಗಿಲಿಗೆ ತಲುಪಿಸಲು ಸಾಧ್ಯವಾಗುತ್ತದೆ~ ಎಂದು ಶಾಸಕ ಪ್ರಿಯಕೃಷ್ಣ ಅಭಿಪ್ರಾಯಪಟ್ಟರು.

ಗೋವಿಂದರಾಜನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಗರದ ಪಟ್ಟೇಗಾರಪಾಳ್ಯದಲ್ಲಿ ಈಚೆಗೆ ಆಯೋಜಿಸಿದ್ದ `ಸೇವಾ ಮೇಳ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಇಲ್ಲದವರಿಗೆ ಈ ಮೇಳಗಳು ಸಹಕಾರಿಯಾಗಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮೇಳದಲ್ಲಿ ಭಾಗವಹಿಸಬೇಕು~ ಎಂದು ಅವರು ಮನವಿ ಮಾಡಿದರು.

ಮಾಜಿ ಉಪಮೇಯರ್ ಪುಟ್ಟರಾಜು, ಪಾಲಿಕೆ ಮಾಜಿ ಸದಸ್ಯ ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಮಂಜುನಾಥ್ ಈ ಸಂದರ್ಭದಲ್ಲಿಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT