ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಓಣಂಗೆ ವಿಶೇಷ ಬಸ್ಸು

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ತಿರುಓಣಂ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ಕೇರಳದ ವಿವಿಧ ಪ್ರದೇಶಗಳಿಗೆ ಇದೇ 8ರವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿದೆ.ಕೋಯಿಕ್ಕೋಡ್, ಎರ್ನಾಕುಳಂ, ಪಾಲಕ್ಕಾಡ್, ಕೊಟ್ಟಾಯಂ, ತ್ರಿಶೂರ್ ಮತ್ತು ತಿರುವನಂತಪುರಕ್ಕೆ ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ಸುಗಳು ತೆರಳಲಿವೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಈ ಸ್ಥಳಗಳಿಂದ ಬೆಂಗಳೂರಿಗೆ ವಾಪಸಾಗುವವರ ಅನುಕೂಲಕ್ಕಾಗಿ ಇದೇ 11ರಂದು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಬಸ್ಸುಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು  ನಿಗಮದ ವೆಬ್‌ಸೈಟ್ (www.­ksrtc.in)) ಮೂಲಕ ಹಾಗೂ 56767 ಸಂಖ್ಯೆಗೆ ಕಿರು ಸಂದೇಶ ಕಳುಹಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT