ಸುರಪುರ (ಯಾದಗಿರಿ ಜಿಲ್ಲೆ): ವೆಂಕಟೇಶ್ವರನ ದರ್ಶನ ಪಡೆಯಲು ಸುರಪುರದಿಂದ ತಿರುಪತಿಗೆ ಹೊರಟಿದ್ದ ಏಳು ಜನ ಭಕ್ತರು ಸೋಮವಾರ ಬೆಳಗಿನ ಜಾವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇವರು ಪ್ರಯಾಣಿಸುತ್ತಿದ್ದ ಜೀಪಿಗೆ ಆಂಧ್ರಪ್ರದೇಶದ ಕರ್ನೂಲ್ ಸಮೀಪದ ನಂದ್ಯಾಲದ ಹತ್ತಿರ ಟೂರಿಸ್ಟ್ ಬಸ್ ಎದುರಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.