ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಮಲಸ್ವಾಮಿಯ ಬ್ರಹ್ಮಮಹೋತ್ಸವ

Last Updated 21 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್: ರಾಮನವಮಿ ಪ್ರಯುಕ್ತ ಇಲ್ಲಿಗೆ ಸಮೀಪದ ಸರ್ಜಾಪುರ ರಸ್ತೆಯ ದೊಡ್ಡಕನ್ನಲ್ಲಿ ಮತ್ತು ಕೈಕೊಂಡ್ರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

ದೊಡ್ಡಕನ್ನಲ್ಲಿಯ ತಿರುಮಲಸ್ವಾಮಿಯ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು. ಸುತ್ತಮುತ್ತಲ ಗ್ರಾಮದ ನೂರಾರು ಗ್ರಾಮಸ್ಥರು ರಥ ಎಳೆದು ಸಂಭ್ರಮಿಸಿದರು. ಇದಕ್ಕೂ ಮುನ್ನ ಶನಿವಾರ ಬೆಳಿಗ್ಗೆ ಸ್ವಾಮಿಗೆ ತಿರುಕಲ್ಯಾಣೋತ್ಸವ ಮಾಡಲಾಯಿತು. ಗಜ, ಹಂಸ, ಅನಂತಶೇಷ, ಅಶ್ವ, ಸಿಂಹ, ಹನುಮ, ಸೂರ್ಯಪ್ರಭ, ಚಂದ್ರಪ್ರಭ ಮತ್ತು ಗರುಡ ವಾಹನೋತ್ಸವದ ಅಲಂಕಾರ ಮಾಡಲಾಗಿತ್ತು.

ಕೈಕೊಂಡ್ರಹಳ್ಳಿಯಲ್ಲಿ ಭೂನೀಳಾ ಸಮೇತ ಚನ್ನಕೇಶವ ಸ್ವಾಮಿಯ ಜಾತ್ರೆ ನಡೆಯಿತು. ಶುಕ್ರವಾರ ಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಲಾ ಯಿತು. ರಾತ್ರಿ ಚನ್ನಕೇಶವ ಸ್ವಾಮಿ ಸೇರಿದಂತೆ 14 ದೇವರ ಪಲ್ಲಕ್ಕಿ ಉತ್ಸವಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT