ಹೈದರಾಬಾದ್, (ಐಎಎನ್ಎಸ್): ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವ ತೆಲಂಗಾಣ ಜಂಟಿ ಕ್ರಿಯಾ ಸಮಿತಿ ಕಾರ್ಯಕರ್ತರು ಶನಿವಾರದಿಂದ ಮೂರು ದಿನ ರೈಲು ತಡೆ ಚಳುವಳಿಯನ್ನು ಆರಂಭಿಸಿದ ಹಿನ್ನೆಲೆಯಲ್ಲಿ ಸಮಿತಿಯ ವಿವಿಧ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಮೌಲಾ ಅಲಿ ಬಳಿಯಲ್ಲಿ ರೈಲು ಹಳಿಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದ್ದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್)ಯ ಸಾಂಸ್ಕೃತಿಕ ಸಂಘಟನೆ ತೆಲಂಗಾಣ ಜಾಗೃತಿ ಸಮಿತಿಯ ನಾಯಕಿ ಕೆ. ಕವಿತಾ ಶನಿವಾರ ಬಂಧಿತರಾದವರಲ್ಲಿ ಮೊದಲಿಗರು ಎಂದು ಪೊಲಿಸರು ತಿಳಿಸಿದ್ದಾರೆ. ಕೆ. ಕವಿತಾ ಅವರು ಟಿಆರ್ ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರ ಮಗಳು.