ಕೋಲ್ಕತ್ತ: ಪಶ್ಚಿಮ ಬಂಗಾಳ ಚುನಾವಣಾ ಆಯೋಗದ ಗೌರವ ಪ್ರತಿನಿಧಿಯಾಗಿ ನೇಮಕಗೊಂಡಿರುವ ಖ್ಯಾತ ಕ್ರಿಕೆಟಿಗ ಗೌರವ್ ಗಂಗೂಲಿ ಅವರು, ಆಡಳಿತಾರೂಢ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಕೈಬಿಡುವಂತೆ ಪ್ರಮುಖ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ ಮಾಡಿದ್ದ ಸಲಹೆಗೆ ಚುನಾವಣಾ ಆಯೋಗ ತಿರಸ್ಕರಿಸಿದೆ.
ತೃಣಮೂಲ ಕಾಂಗ್ರೆಸ್ ನೀಡಿದ ದೂರು ಮತ್ತು ಸಲಹೆಯನ್ನು ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗದ ಜತೆ ಚರ್ಚೆ ನಡೆಸಿದ ಬಳಿಕ ತೃಣಮೂಲ ಕಾಂಗ್ರೆಸ್ ದೂರಿನಲ್ಲಿ ಹುರುಳಿಲ್ಲ ಎನ್ನುವ ನಿರ್ಧಾರ ಕೈಗೊಂಡಿದೆ.