ಕೋಲ್ಕತ್ತ (ಪಿಟಿಐ): ಮಣಿಪುರದ 48 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ.
ರಾಜ್ಯದಲ್ಲಿ ಜಾರಿಯಲ್ಲಿರುವ ಸೇನಾ ಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಎ) ವಿರುದ್ಧ ಹರಿಹಾಯ್ದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್, `ವಿಶೇಷಾಧಿಕಾರ ಕಾಯ್ದೆಯ ದುರ್ಬಳಕೆ ಹೆಚ್ಚಾಗುತ್ತಿದ್ದು, ಮಣಿಪುರದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಯ್ದೆ ಹಿಂತೆಗೆದುಕೊಳ್ಳುವಂತೆ ನಮ್ಮ ಸಂಸದರು ಸಂಸತ್ನಲ್ಲಿ ಒತ್ತಾಯಿಸಲಿದ್ದಾರೆ~ ಎಂದು ಜನತೆಗೆ ಭರವಸೆ ನೀಡಿದ್ದಾರೆ.