ಸದ್ಯಕ್ಕೆ ಆಹಾರ ಹಣದುಬ್ಬರ ಗರಿಷ್ಠ ಮಟ್ಟ ತಲುಪಲು ಕಾರಣವಾಗಿರುವ ಪೂರೈಕೆ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಸಗಟು ಮತ್ತು ಚಿಲ್ಲರೆ ಮಾರಾಟ ಬೆಲೆಯಲ್ಲಿನ ಹೆಚ್ಚುತ್ತಿರುವ ಅಂತರ ತಗ್ಗಿಸಬೇಕು. ಪೂರೈಕೆಯಲ್ಲಿನ ಅಡಚಣೆಗಳನ್ನು ನಿವಾರಿಸಬೇಕು. ಕೃಷಿ ಉತ್ಪಾದನೆ ಹೆಚ್ಚಿಸಬೇಕು, ಆಹಾರ ಧಾನ್ಯಗಳ ಸಮರ್ಪಕ ವಿತರಣೆ ಮತ್ತು ಮಾರಾಟ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದರು. ಕೆಲ ರಾಜ್ಯಗಳಲ್ಲಿ ಕೃಷಿ ಉತ್ಪನ್ನ ಮತ್ತು ಮಾರಾಟ ಕಾಯ್ದೆಯಲ್ಲಿ (ಎಪಿಎಂಸಿ) ಅಗತ್ಯ ಸುಧಾರಣೆಗಳನ್ನು ತರಬೇಕಾಗಿದೆ. ಕೇಂದ್ರ ಸರ್ಕಾರವು ಅಗತ್ಯವಾದ ಸರಕುಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದು, ಸರಕುಗಳ ಪೂರೈಕೆ ಹೆಚ್ಚಿಸಲು ರಫ್ತು ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದೂ ಪ್ರಣವ್ ನುಡಿದರು.