ನವದೆಹಲಿ (ಪಿಟಿಐ): ತೆಲಂಗಾಣ ರಚನೆ ಘೋಷಣೆ ನಂತರ ಪಕ್ಷದ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಸೀಮಾಂಧ್ರ ಮತ್ತು ರಾಯಲಸೀಮೆಯ ಮುಖಂಡರ ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.
ಈ ಸಮಿತಿಯಲ್ಲಿ ಆಂಧ್ರ ಪ್ರದೇಶದ ಪಕ್ಷದ ಉಸ್ತುವಾರಿಯಾಗಿರುವ ದಿಗ್ವಿಜಯ್ ಸಿಂಗ್ ಕೂಡ ಇದ್ದಾರೆ ಎಂದು ಮೂಲಗಳು ಹೇಳಿವೆ.