ಸೋಮವಾರ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ದಿನಾಂಕವನ್ನು ನಿರ್ಣಯಿಸುವ ಸಾಧ್ಯತೆಯಿದೆ. ವರದಿ ಸಾರ್ವಜನಿಕವಾಗಿ ಪ್ರಕಟಗೊಂಡ ನಂತರದ ಜ.6ರ ಸಭೆಯಲ್ಲಿ ಪ್ರಮುಖ ಪಕ್ಷಗಳಾದ ಟಿಆರ್ಎಸ್, ಟಿಡಿಪಿ ಮತ್ತು ಬಿಜೆಪಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಕೇಂದ್ರ ಎಲ್ಲಾ ಎಂಟು ಪಕ್ಷಗಳ ಮನವೊಲಿಸಲು ಸರ್ವಪ್ರಯತ್ನ ನಡೆಸಿದೆ. ಮುಂದಿನ ಸಭೆಯಲ್ಲಿ ಎಲ್ಲಾ ಪಕ್ಷಗಳೂ ಭಾಗವಹಿಸುವ ಬಗ್ಗೆ ಅದು ಆಶಾಭಾವ ವ್ಯಕ್ತಪಡಿಸಿದೆ.