ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಶ್ರೀಗೆ ಜಿಎಸ್‌ಎಸ್ ಪ್ರಶಸ್ತಿ

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೆಂಗಳೂರು: `ಶೂದ್ರ' ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪತ್ರಿಕೆಯು ನಡೆಸಿದ 2012ನೇ ಸಾಲಿನ `ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಗೌರವ ಕಾವ್ಯ ಸ್ಪರ್ಧೆ'ಯಲ್ಲಿ ಯುವ ಲೇಖಕಿ ಜ.ನಾ.ತೇಜಶ್ರೀ ಅವರ `ಅವನರಿವಲ್ಲಿ' ಹಾಗೂ `ಉಸ್ರುಬುಂಡೆ' ಕವನ ಸಂಕಲನಗಳು ಪ್ರಶಸ್ತಿಗೆ ಪಾತ್ರವಾಗಿವೆ.

ಪ್ರಶಸ್ತಿಯ ಮೊತ್ತ 10 ಸಾವಿರ ರೂಪಾಯಿ . ಜನವರಿ 6ರಂದು ನಡೆಯುವ `ಶೂದ್ರ'ದ ತಿಂಗಳ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿರಿಯ ವಿಮರ್ಶಕ ಡಾ.ಎಚ್. ಎಸ್.ರಾಘವೇಂದ್ರ ರಾವ್ ತೀರ್ಪುಗಾರರಾಗಿದ್ದರು ಎಂದು ಪತ್ರಿಕೆ ಸಂಪಾದಕ ಶೂದ್ರ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT