ಇತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದಂತೆ, (ಕಬ್ಬು, ಮೆಕ್ಕೆಜೋಳ) ತೊಗರಿಗೂ ಬೆಂಬಲ ಘೋಷಿಸಿ, ಸರ್ಕಾರವೇ ನೇರವಾಗಿ ಖರೀದಿ ಮಾಡಬೇಕು. ರೈತರು ಸಂಕಷ್ಟದಲ್ಲಿದ್ದಾರೆ. ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಉತ್ತರ ಕರ್ನಾಟಕದ ಬರನಾಡಿನ ಜಿಲ್ಲೆಗಳಾದ ಗುಲ್ಬರ್ಗಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಅತಿ ಹೆಚ್ಚು ತೊಗರಿ ಬೆಳೆಯುತ್ತಾರೆ. ಆದ್ದರಿಂದ ಈ ಭಾಗದ ಜನಪ್ರತಿನಿಧಿಗಳು ಇದನ್ನು ಗಮನಿಸಬೇಕು.
–ಸಿದ್ಧಾರಾಮ ಗ, ಯರಗಲ್, ಬಿಜಾಪುರ.