ಯಾದಗಿರಿ: ತಾಲ್ಲೂಕಿನ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಂದೆಡಗಿ ಗ್ರಾಮದಲ್ಲಿ ನಡೆದ ತ್ರಿವಳಿ ಕೊಲೆ ಹಾಗೂ ದರೋಡೆ ಪ್ರಕರಣದ ನಾಲ್ವರಿಗೆ ಇಲ್ಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮರಣದಂಡನೆವಿಧಿಸಿದೆ.
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಬಸವರಾಜ ಪಲ್ಲೆಪ್ಪ ಚಿಗರಿಕಾರ (48), ಪಲ್ಲಾ ಶಂಕ್ರೆಪ್ಪ ಚಿಗರಿಕಾರ (25), ಯಂಕಪ್ಪ ಹುಲ್ಲೆಪ್ಪ ಚಿಗರಿಕಾರ (53), ರಮೇಶ (22) ಅವರಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಂಜೀವಕುಮಾರ ಹಂಚಾಟೆ ಅವರು ಮರಣದಂಡನೆ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.
ಪ್ರಕರಣದ ವಿವರ: ಸೈದಾಪುರ ಠಾಣೆ ವ್ಯಾಪ್ತಿಯ ಬಸವರಾಜಪ್ಪ ಗೌಡರ ಹೊಲದಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದ ಆಂಧ್ರಪ್ರದೇಶ ಮೂಲದ ಸೂರ್ಯಕಾಂತಮ್ಮ ಹಾಗೂ ಇಬ್ಬರು ಮಕ್ಕಳಾದ ಶ್ರೀನಿವಾಸ (22) ಶಿವರಡ್ಡಿ (25) ಶೆಡ್ನಲ್ಲಿ ವಾಸವಾಗಿದ್ದರು. 2009 ಫೆಬ್ರುವರಿ 14ರಂದು ರಾತ್ರಿ ಶೆಡ್ ಮುಂದೆ ಮಲಗಿದ್ದ ಬಸವನಗೌಡ ಎಂಬುವವರನ್ನು ನಾಲ್ಕೂ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಲೆಗೈದರು.