ಚಿತ್ರದುರ್ಗ: ನಗರದ ಅಗಸನಕಲ್ಲು ಬಳಿ ಇರುವ ತ್ರಿಶೂಲ್ ಹತ್ತಿ ಮಿಲ್ನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಹತ್ತಿ ನಾಶವಾಗಿದ್ದು, ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಪರಿಣಾಮ ತುರ್ತು ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿ ನಿಂದಿಸುವಲ್ಲಿ ನಿರತರಾದರು. ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದಂತಾಯಿತು.
ಕರ್ತವ್ಯ ನಿರತ ಮಿಲ್ ಸಿಬ್ಬಂದಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನುವುದು ತಿಳಿದುಬಂದಿದೆ.