ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಗೆ ಶನಿವಾರ ಬಂದಿದ್ದರು.
ಡಿಸಿಪಿ ಎಸ್.ಎನ್.ಸಿದ್ದರಾಮಪ್ಪ ಅವರನ್ನು ಭೇಟಿ ಮಾಡಬೇಕೆಂದು ಅವರು ಮನವಿ ಮಾಡಿದರು. ಆದರೆ ಡಿಸಿಪಿ ಅವರು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರಿಂದ ಭೇಟಿಯಾಗಿಲ್ಲ. ಸೋಮವಾರ ಅವರು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.`ವಿಜಯಲಕ್ಷ್ಮಿ ಅವರು ಕಚೇರಿಗೆ ಬಂದಿದ್ದು ನಿಜ, ಸಭೆಯಲ್ಲಿ ಇದ್ದುದರಿಂದ ಅವರನ್ನು ಭೇಟಿ ಮಾಡಲು ಆಗಲಿಲ್ಲ. ಅವರು ಯಾವ ಕಾರಣಕ್ಕೆ ಬಂದಿದ್ದರು ಎಂದು ಗೊತ್ತಿಲ್ಲ~ ಎಂದು ಸಿದ್ದರಾಮಪ್ಪ `ಪ್ರಜಾವಾಣಿ~ಗೆ ತಿಳಿಸಿದರು.