ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಕುಟುಂಬದ ದಹನ ಪ್ರಕರಣ: 15 ಜನರಿಗೆ ಶಿಕ್ಷೆ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹರಿಯಾಣದ ದಲಿತ ಕುಟುಂಬವೊಂದರ ತಂದೆ ಮತ್ತು ಆತನ ವಿಕಲಾಂಗ ಮಗಳನ್ನು ಜೀವಂತ ದಹಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ 15 ಜನರಿಗೆ ಶಿಕ್ಷೆ ವಿಧಿಸಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಕಾಮಿನಿ ಲೌ ಅವರು ಶನಿವಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದರು.

ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ಕಳೆದ ವರ್ಷ ಹರಿಯಾಣದ ಮಿರ್ಚಾಪುರ ಗ್ರಾಮದಲ್ಲಿ ಜಾಟ್ ಜನಾಂಗಕ್ಕೆ ಸೇರಿದ ಗುಂಪು ದಲಿತ ಕುಟುಂಬದ ಮೇಲೆ ಈ ಅಮಾನುಷ ಹಲ್ಲೆ ನಡೆಸಿತ್ತು.  70 ವರ್ಷದ ವೃದ್ಧ ಮತ್ತು ಆತನ ಅಂಗವಿಕಲ ಮಗಳನ್ನು ಜೀವಂತವಾಗಿ ದಹಿಸಲಾಗಿತ್ತು. 97 ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT