ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಳ ಸೇರುವುದಿಲ್ಲ

Last Updated 4 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ಬಿ.ಶ್ರೀರಾಮುಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಬಿಜೆಪಿಯ ಆಂತರಿಕ ವಿಷಯ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
`ಬಿಜೆಪಿಯ ಆಂತರಿಕ ಸಂಘರ್ಷ ಈಗ ಬೀದಿಗೆ ಬಂದಿದೆ. ಈ ಸರ್ಕಾರ ಬಂದ ದಿನದಿಂದಲೂ ಶಾಸಕರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆ ಇದೆ. ಈಗ ಅದು ಸ್ಫೋಟಗೊಂಡಿದೆ~ ಎಂದರು.

`ಹಿಂದೆ ಪ್ರವಾಹ ಬಂದಾಗಲೂ ಬಿಜೆಪಿಯಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದ್ದ ಪರಿಣಾಮವಾಗಿ ಸರ್ಕಾರ ಜನರ ನೆರವಿಗೆ ಧಾವಿಸಿರಲಿಲ್ಲ. ಈಗಲೂ ಅತಿವೃಷ್ಟಿಯಿಂದ ಜನರು ಸಮಸ್ಯೆಯಲ್ಲಿದ್ದಾರೆ. ಬಿಜೆಪಿಯಲ್ಲಿ ಮತ್ತೆ ಬಿಕ್ಕಟ್ಟು ಉದ್ಭವಿಸುವ ಲಕ್ಷಣ ಕಾಣಿಸುತ್ತಿದೆ. ಬಿಜೆಪಿ ಮುಖಂಡರು ವಿಧಾನಸಭೆಯನ್ನು ವಿಸರ್ಜಿಸಿ ಮತ್ತೆ ಜನಾದೇಶ ಪಡೆಯಲು ಮುಂದಾಗಲಿ~ ಎಂದು ಒತ್ತಾಯಿಸಿದರು.

`ಶ್ರೀರಾಮುಲು ಜೆಡಿಎಸ್ ಸೇರುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಈವರೆಗೂ ಅಂತಹ ಯಾವುದೇ ಚರ್ಚೆಯೂ ನಡೆದಿಲ್ಲ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT