ಗುರುವಾಯೂರಂ (ಪಿಟಿಐ): ಭಾರತ ತಂಡದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ರಾಜಸ್ಥಾನದ ಪ್ರತಿಷ್ಠಿತ ಮನೆತನದ ಭುವನೇಶ್ವರಿ ಕುಮಾರಿ ಅವರನ್ನು ವರಿಸಿದರು.
ಗುರುವಾರ ಬೆಳಿಗ್ಗೆ ಇಲ್ಲಿನ ಶ್ರೀ ಕೃಷ್ಣ ದೇವಾಲಯದಲ್ಲಿ ನಡೆದ ಸರಳ ವಿವಾಹ ಸಮಾರಂಭದಲ್ಲಿ ಈ ಜೋಡಿ ನವ ಜೀವನಕ್ಕೆ ಕಾಲಿಟ್ಟಿತು. ಸಮಾರಂಭದಲ್ಲಿ ಕೆಲವೇ ಕೆಲವು ಸ್ನೇಹಿತರು ಹಾಗೂ ಸಂಬಂಧಿಕರು ಮಾತ್ರ ಪಾಲ್ಗೊಂಡಿದ್ದರು.
ವೃತ್ತಿಯಲ್ಲಿ ಆಭರಣ ವಿನ್ಯಾಸಕಿಯಾ ಗಿರುವ ಭುವನೇಶ್ವರಿ ಹಾಗೂ ಶ್ರೀಶಾಂತ್ ಕಳೆದ ಆರು ವರ್ಷಗಳಿಂದ ಪರಿಚಿತರಾ ಗಿದ್ದರು.
ಐಪಿಎಲ್ 6 ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದರು. ಹೀಗಾಗಿ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಜಾಮೀನು ಮೇಲೆ ಹೊರಬಂದಿದ್ದಾರೆ. ಅವರ ಮೇಲೆ ಬಿಸಿಸಿಐ ಆಜೀವ ನಿಷೇಧ ಹೇರಿದೆ.