ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಬೋಳ್ಕರ್ ಹತ್ಯೆ: ಎನ್‌ಐಎಗೆ ಪ್ರಕರಣ ವರ್ಗಾಯಿಸಲು ಪಿಐಎಲ್

Last Updated 18 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮೂಢನಂಬಿಕೆ ಮತ್ತು ಅಂಧಾನುಕರಣೆ ವಿರೋಧಿ ಕಾರ್ಯಕರ್ತ  ನರೇಂದ್ರ ದಾಬೋಳ್ಕರ್ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾಯಿ­ಸಲು ಕೋರಿ ಬಾಂಬೆ ಹೈಕೋರ್ಟ್‌ಗೆ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ­ಯಾಗಿದೆ.

ಪತ್ರಕರ್ತ ಕೇತನ್ ತಿರ್ಡೋಕರ್ ಎಂಬುವವರು ಪಿಐಎಲ್ ಸಲ್ಲಿಸಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ‘ದಾಬೋಳ್ಕರ್ ಹತ್ಯೆ ಕುರಿತು ಪುಣೆ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಅಲ್ಲದೆ, ತನಿಖೆಯ ದಿಕ್ಕು ತಪ್ಪಿ­ಸು­ತ್ತಿ­ದ್ದಾರೆ. ಹಾಗಾಗಿ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿ­ಸಬೇಕು’ ಎಂದು ಕೇತನ್ ಅರ್ಜಿಯಲ್ಲಿ ಕೋರಿದ್ದಾರೆ.

ಮೂಢನಂಬಿಕೆ ಮತ್ತು ಅಂಧಾನು­ಕರಣೆ ವಿರುದ್ಧ ಸಮರ ಸಾರುವ ಮೂಲಕ ಸಂಪ್ರದಾಯವಾದಿಗಳ ಕೆಂಗ­ಣ್ಣಿಗೆ ಗುರಿ ಯಾಗಿದ್ದ ದಾಬೋಳ್ಕರ್ ಅವ­ರನ್ನು, ಆಗಸ್ಟ್ 2ರಂದು ಅಪರಿಚಿತರು ಗುಂಡಿಟ್ಟು ಹತ್ಯೆಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT