ಮುಂಬೈ (ಪಿಟಿಐ): ಮೂಢನಂಬಿಕೆ ಮತ್ತು ಅಂಧಾನುಕರಣೆ ವಿರೋಧಿ ಕಾರ್ಯಕರ್ತ ನರೇಂದ್ರ ದಾಬೋಳ್ಕರ್ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವರ್ಗಾಯಿಸಲು ಕೋರಿ ಬಾಂಬೆ ಹೈಕೋರ್ಟ್ಗೆ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.
ಪತ್ರಕರ್ತ ಕೇತನ್ ತಿರ್ಡೋಕರ್ ಎಂಬುವವರು ಪಿಐಎಲ್ ಸಲ್ಲಿಸಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ‘ದಾಬೋಳ್ಕರ್ ಹತ್ಯೆ ಕುರಿತು ಪುಣೆ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಅಲ್ಲದೆ, ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಬೇಕು’ ಎಂದು ಕೇತನ್ ಅರ್ಜಿಯಲ್ಲಿ ಕೋರಿದ್ದಾರೆ.
ಮೂಢನಂಬಿಕೆ ಮತ್ತು ಅಂಧಾನುಕರಣೆ ವಿರುದ್ಧ ಸಮರ ಸಾರುವ ಮೂಲಕ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿ ಯಾಗಿದ್ದ ದಾಬೋಳ್ಕರ್ ಅವರನ್ನು, ಆಗಸ್ಟ್ 2ರಂದು ಅಪರಿಚಿತರು ಗುಂಡಿಟ್ಟು ಹತ್ಯೆಗೈದಿದ್ದರು.