ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಕ್ ಭಾರಾಧ್ವಜ್ ಹತ್ಯೆ : ಮಗನ ಬಂಧನ

Last Updated 9 ಏಪ್ರಿಲ್ 2013, 11:01 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಬಿಎಸ್‌ಪಿ ನಾಯಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದೀಪಕ್ ಭಾರದ್ವಾಜ್  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ನಿತೇಶ್ ಕುಮಾರ್‌ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಂದೆಯ ಹತ್ಯೆಗೆ ಮಗ ನಿತೇಶ್ ಕುಮಾರ್ ಸುಫಾರಿ ನೀಡಿರಬಹುದೆಂದು ಶಂಕಿಸಲಾಗಿದೆ. ಕೊಲೆಗೆ 3 ರಿಂದ 6 ಕೋಟಿ ರೂಪಾಯಿ ಸುಫಾರಿ ನೀಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ದೀಪಕ್ ಭಾರದ್ವಾಜ್ ಕೊಲೆ ಪ್ರಕರಣದಲ್ಲಿ ನಿತೇಶ್ ಕುಮಾರ್‌ನ  ವಕೀಲರೊಬ್ಬರು ಹಾಗೂ ಸ್ವಾಜೀಯೊಬ್ಬರ ಪಾತ್ರ ಇರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಘಟನೆ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಮಾರ್ಚ್ 26ರಂದು ದಕ್ಷಿಣ ದೆಹಲಿಯ ಫಾರ್ಮ್ ಹೌಸ್‌ನಲ್ಲಿ ದೀಪಕ್ ಭಾರದ್ವಾಜ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT