ಗ್ರಾಮ ಪಂಚಾಯತಿ ಅಧ್ಯಕ್ಷೆ ಗಂಗವ್ವ ಮಜ್ಜಿಗುಡ್ಡ ಪಂದ್ಯಾವಳಿಗೆ ಚಾಲನೆ ನೀಡಿದರು. ತಿಪ್ಪಣ್ಣ ಅಂಬಕ್ಕಿ ಅಧ್ಯಕ್ಷತೆ ವಹಿಸಿದ್ದರು, ಆಯ್. ಎಸ್ ಮಟ್ಟಿ, ಎನ್. ಕೆ. ಅಬಕ್ಕಿ, ಶರಣಪ್ಪ ಉದ್ಧಾರ, ವೀರಣ್ಣ ಕುಂಬಾರ ಹಾಜರಿದ್ದರು. ಸ್ವಾಮಿ ವಿವೇಕಾನಂದ ಕ್ರೀಡಾ ಹಾಗೂ ಸಾಂಸ್ಕ್ರತಿಕ ಯುವ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಕುಲಕರ್ಣಿ ನಿರೂಪಿಸಿ ವಂದಿಸಿದರು.
ಫಲಿತಾಶ; ಕೋಟೆ ವೀರಭದ್ರೇಶ್ವರ ಯುವಕ ಮಂಡಳ ಎ ತಂಡ ಪ್ರಥಮ ಹಾಗೂ ಕೋಟೆ ವೀರಭದ್ರೇಶ್ವರ ಯುವಕ ಮಂಡಳ ಬಿ ತಂಡ ದ್ವಿತೀಯ ಸ್ಥಾನ ಪಡೆದವು.
ವೈದ್ಯಕೀಯ ಸಂಸ್ಥೆಗಳಿಗೆ ಸೂಚನೆ
ಗದಗ: ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಕ್ರಿಯೆ ಮಾ.2ರಂದು ಪೂರ್ಣಗೊಳ್ಳಲಿದ್ದು, ಕಡ್ಡಾಯವಾಗಿ ನೋಂದಣಿ ಮಾಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.