ನವದೆಹಲಿ (ಪಿಟಿಐ): ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಕೆ.ಗಂಗೂಲಿ ಅವರ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿರುವ ಕಾನೂನು ತರಬೇತಿ ವಿದ್ಯಾರ್ಥಿನಿಗೆ ದೆಹಲಿ ಪೊಲೀಸರು ಶುಕ್ರವಾರ ಮುಂದೆ ಬಂದು ದೂರು ದಾಖಲಿಸುವಂತೆ ಹೇಳಿದ್ದಾರೆ.
`ಆರೋಪ ಕುರಿತಂತೆ ದೂರು ದಾಖಲಿಸುವ ಜತೆಗೆ ಹೇಳಿಕೆ ನೀಡುವಂತೆ ನಾವು ಯುವತಿಗೆ ಇಮೇಲ್ ಕಳುಹಿಸಿದ್ದೇವೆ. ಕಿರುಕುಳಕ್ಕೆ ಒಳಗಾದವರು ಮುಂದೆ ಬಂದರೆ ಮಾತ್ರ ಮುಂದಿನ ಕ್ರಮ ಕುರಿತು ನಾವು ನಿರ್ಧರಿಸಲು ಸಾಧ್ಯ' ಪೊಲೀಸ್ ಉಪ ಆಯುಕ್ತ (ನವದೆಹಲಿ) ಎಸ್ಬಿಎಸ್ ತ್ಯಾಗಿ ಹೇಳಿದರು.
ಇದೇ ವೇಳೆ, ಅವರು ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಯಾವುದೇ ಕಾನೂನು ಸಲಹೆ ಬಯಸಿಲ್ಲ ಎಂದು ಸ್ಪಷ್ಟಪಡಿಸಿದರು.
ಏತನ್ಮಧ್ಯೆ, ದೆಹಲಿ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕರಾದ ಎಸ್.ಎನ್.ಶರ್ಮಾ ಅವರು ತಿಲಕ್ ಮಾರ್ಗ ಪೊಲೀಸ್ ಠಾಣೆಗೆ ಲಿಖಿತ ದೂರೊಂದನ್ನು ನೀಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಹೇಳಿದ್ದಾರೆ.
ಆದಾಗ್ಯೂ, ಪೊಲೀಸರು ಯಾವುದೇ ದೂರು ದಾಖಲಿಸಿಲ್ಲ. ಕಿರುಕುಳಕ್ಕೆ ಒಳಗಾದ ಮಹಿಳೆಯೇ ಮುಂದೆ ಬರಲಿ ಎಂದು ಹೇಳುತ್ತಿದ್ದಾರೆ.