ನವದೆಹಲಿ (ಪಿಟಿಐ/ಐಎಎನ್ಎಸ್): ನಾಳೆ ದೆಹಲಿ ವಿಧಾನಸಭೆ ಚುನಾವಣೆ ಬುಧವಾರ ನಡೆಯಲಿದ್ದು ಸೂಕ್ಷ್ಮ ಪ್ರದೇಶಗಳಲ್ಲಿ ಚುನಾವಣಾ ಆಯೋಗ ತೀವ್ರ ಕಟ್ಟೆಚ್ಚರ ವಹಿಸಿದೆ. ಕೊಳಚೆ ಪ್ರದೇಶ ಮತ್ತು ಅನಧಿಕೃತ ಕಾಲೊನಿಗಳಲ್ಲಿ ಹಣ, ಹೆಂಡದ ದುರುಪಯೋಗ ಮತ್ತು ತೋಳ್ಬಲದಿಂದ ಮತದಾರರನ್ನು ಹೆದರಿಸುವ ಸಾಧ್ಯತೆ ಇರುವ ಕಾರಣಕ್ಕಾಗಿ ಕೆಲವು ಪ್ರದೇಶಗಳಲ್ಲಿ ಆಯೋಗ ಹೆಚ್ಚಿನ ನಿಗಾ ವಹಿಸಿದೆ.
ಮತದಾರರಿಗೆ ಲಂಚದ ಆಮಿಷವೊಡ್ಡುವ ಪ್ರಕರಣ ಪತ್ತೆಯಾದರೆ ರಾಜ-ಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳಷ್ಟೇ ಅಲ್ಲ. ಲಂಚ ಪಡೆದ ವ್ಯಕ್ತಿಯ ಮೇಲೂ ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಮುಖ್ಯ ಚುನಾವಣಾಧಿಕಾರಿ ವಿಜಯ ದೇವ್ ತಿಳಿಸಿದ್ದಾರೆ.