ಕಿಸ್ತ್ವಾರ/ಜಮ್ಮು ಕಾಶ್ಮೀರ (ಪಿಟಿಐ): ದೆಹಲಿ ಹೈಕೋರ್ಟ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿಯೊಬ್ಬ ತನ್ನ ಈ ಹಿಂದಿನ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆ ನೀಡಿದ್ದು, ಈ ಮೂಲಕ ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್ಐಎ) ಮತ್ತೊಂದು ಹಿನ್ನಡೆಯಾಗಿದೆ.
ಬಂಧಿತ ನಾಲ್ವರು ಆರೋಪಿಗಳಲ್ಲಿ ಒಬ್ಬನಾಗಿರುವ ಅಮೀರ್ ಅಬ್ಬಾಸ್ ದೇವ್, ಈ ದಾಳಿಯಲ್ಲಿ ತನ್ನ ಪಾತ್ರ ಇರುವುದಾಗಿ ಈ ಮೊದಲು ತಪ್ಪೊಪ್ಪಿಕೊಂಡಿದ್ದ. ಆದರೆ ಇದೀಗ ಈ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ತನಗೂ, ಸ್ಫೋಟಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾನೆ.