ಎತ್ತರ ಪ್ರದೇಶದ ನೆತ್ತಿಯಲ್ಲಿರುವ ದೇಗುಲದ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಗುಣಮಟ್ಟದ ಕಬ್ಬಿಣದ ಅದಿರು ಇರುವುದರಿಂದ ದೇಗುಲವನ್ನೇ ಸ್ಥಳಾಂತರಿಸುವ ಗಣಿ ಕಂಪನಿಗಳ ಹುನ್ನಾರಕ್ಕೆ ವ್ಯಾಪಕ ಪ್ರತಿಭಟನೆ ಬಂದ ಕಾರಣ ತಡೆ ನೀಡಲಾಯಿತು.
ದೇಗುಲದ ಸುತ್ತ 200 ಮೀ. ವ್ಯಾಪ್ತಿ ಗಣಿ ಚಟುವಟಿಕೆಗೆ ನಿಷೇಧವಿದೆ. ಅಂದಿನಿಂದ ದೇಗುಲದ ವ್ಯಾಪ್ತಿಯಲ್ಲಿ ಬರುವ ಸುರೇಂದ್ರನಾಥ್ ಸಿಂಗ್, ಗಣಪತಿಸಿಂಗ್ ಹಾಗೂ ಪೊದ್ದಾರ್ ಮಿನರಲ್ಸ್ ಕಂಪನಿಯವರು ದೇವಾಲಯದ ರಸ್ತೆಯನ್ನು ನಿರ್ಬಂಧಿಸಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.