ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೃಷಿ ಮಾರುಕಟ್ಟೆ ಮತ್ತಿತರ ಕಡೆ ಸುಮಾರು ಐದು ಲಕ್ಷಕ್ಕಿಂತ ಅಧಿಕ ಕಾರ್ಮಿಕರು ಹತ್ತಾರು ವರ್ಷಗಳಿಂದ ಭಾರವಾದ ಮೂಟೆಗಳನ್ನು ಹೊರುತ್ತಾ ಯಾವುದೇ ಒಂದು ಕನಿಷ್ಠ ಸೌಲಭ್ಯಗಳಿಲ್ಲದೆ ದುಡಿಯು ತ್ತಿದ್ದಾರೆ. ಈ ಕಾರ್ಮಿಕರ ಬಗ್ಗೆ ಹಲ ವಾರು ಬಾರಿ ಹೋರಾಟ ಮಾಡಿ ದರೂ ಯಾವುದೇ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದರು.