ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಅ.12 ರವರೆಗೆ ನಡೆಯಲಿರುವ ಅಖಿಲ ಭಾರತ 22ನೇ ರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾ ಕೂಟಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ.

ನವೋದಯ ವಿದ್ಯಾಲಯ ಸಮಿತಿ ಆಯುಕ್ತ ಅಪೂರ್ವ ಚಂದ್ರ ಕ್ರೀಡಾಕೂಟವನ್ನು ಉದ್ಘಾಟಿಸಿದರು. `ಕ್ರೀಡೆಗಳು, ದೈಹಿಕ ಹಾಗೂ ಮಾನಸಿಕ ಚೈತನ್ಯಕ್ಕೆ ಪೂರಕವಾಗುವುದು. ಬಾಂಧವ್ಯವನ್ನು ಇಮ್ಮಡಿಗೊಳಿಸುತ್ತವೆ~ ಎಂದು ಅವರು ಅಭಿಪ್ರಾಯ ಪಟ್ಟರು.

ಸಮಾರಂಭದಲ್ಲಿ ಬೆಂಗಳೂರು ಗ್ರಾ.ಜಿಲ್ಲಾಧಿಕಾರಿ ಆರ್.ಕೆ.ರಾಜು, ನವೋದಯ ವಿದ್ಯಾಲಯ ಸಮಿತಿ ಜಂಟಿ ಆಯುಕ್ತ ಟಿ.ಸಿ.ಎಸ್.ನಾಯ್ಡು, ಉಪ ಆಯುಕ್ತ ಶಡಗೋಪನ್, ಇಂಟೆಲ್ ಕಂಪನಿಯ ವ್ಯವಸ್ಥಾಪಕ ವಿಜಯ ಶಂಕರ್, ನವೋದಯ ವಿದ್ಯಾಲಯದ ಪ್ರಾಚಾರ್ಯ ಟಿ.ಗೋಪಾಲಕೃಷ್ಣ ಮುಂತಾದವರು ಭಾಗವಹಿಸಿದ್ದರು.  ಇದೇ ಸಂದರ್ಭದಲ್ಲಿ ನವೋದಯ  ಸಭಾಂಗಣದಲ್ಲಿ ಇಂಟೆಲ್ ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT