ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ: ಕಲಿಕುಂಡ ಆರಾಧನೆ

Last Updated 16 ಸೆಪ್ಟೆಂಬರ್ 2013, 9:32 IST
ಅಕ್ಷರ ಗಾತ್ರ

ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರ ಷಷ್ಟ್ಯಬ್ದ ಆಚರಣೆಯ ಹಿನ್ನೆಲೆಯಲ್ಲಿ ಶನಿವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಕಲಿಕುಂಡ ಯಂತ್ರಾರಾಧನೆ, ಅಷ್ಟವಿಧಾರ್ಚನೆ ಪೂಜೆ, ಧೂಪಾರ್ಚನೆ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಮಂಗಳೂರಿನ ಎಸ್‌ಡಿಎಂ ಕಾನೂನು ಮಹಾ­ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪ್ರೊ. ರಾಜೇಂದ್ರ ಶೆಟ್ಟಿ ಶುಭಾಶಂಸನೆ ಮಾಡಿ, ಡಿ.ಹರ್ಷೇಂದ್ರ ಕುಮಾರ್ ಅವರ ನೇರ ನಡೆ-ನುಡಿ, ಸ್ನೇಹ ಪ್ರವೃತ್ತಿ, ಶಿಸ್ತಿನ ಜೀವನ, ಪ್ರಾಮಾಣಿಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರಿನ ಖ್ಯಾತ ವೈದ್ಯ ಡಾ. ಟಿ. ನಾಗ­ಕುಮಾರ ಶೆಟ್ಟಿ ’ರತ್ನಾಕರನ ಹಾಡುಗಳು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಷ್ಟಷ್ಯಬ್ದ ಆಚರಣೆ­ಯ ಸವಿ ನೆನಪಿಗಾಗಿ ಈ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಹೇಮಾ­ವತಿ ವಿ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಪ್ರೊ.ಎಸ್.­ಪ್ರಭಾಕರ್ ಮತ್ತು ಡಾ.ಬಿ.ಯಶೋ­ವರ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT