ಸಂಚಾರಿ ಪ್ರಯೋಗಾಲಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸ್ಥಳದಲ್ಲಿಯೇ ಪರೀಕ್ಷೆ ನಡೆಸಿ ಗ್ರಾಹಕರಿಗೆ ಹಾಲಿನ ಗುಣಮಟ್ಟದ ಕುರಿತು ಮನವರಿಕೆ ಮಾಡಿಕೊಡಲಾಗುವುದು. ಈ ವಾಹನ ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಾನುವಾರುಗಳಿಗೆ ತುರ್ತು ವೈದ್ಯಕೀಯ ಸೇವೆ ಕಲ್ಪಿಸಲು ಬೀದರ್ ಪಶು ವೈದ್ಯಕೀಯ ವಿಶ್ವವಿದ್ಯಾಲಯವು `ಧನ್ವಂತರಿ' ಅಂಬ್ಯುಲೆನ್ಸ್ ಸೇವೆ ಆರಂಭಿಸಿದ್ದು, ಇದಕ್ಕಾಗಿ ರೈತರಿಂದ ಪ್ರತಿ ಕಿ.ಮೀ.ಗೆ 12 ರೂಪಾಯಿ ಪಡೆಯಲಾಗುತ್ತಿದೆ. ಇದೀಗ ಈ ಪೈಕಿ 10 ರೂಪಾಯಿಯನ್ನು ಗುಲ್ಬರ್ಗ- ಬೀದರ್ ಹಾಲು ಒಕ್ಕೂಟ ಭರಿಸಲಿದೆ ಎಂದು ಅವರು ಹೇಳಿದರು.