ಈ ಯೋಜನೆಯಡಿ ಸುಮಾರು 1,500 ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ಇದರ ಉಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಅದರಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಆಯಾ ವಿಭಾಗಕ್ಕೆ ಸೇರಿದ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸದಸ್ಯರಾಗಿ ಕೆಲಸ ಮಾಡಲಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.