ಬೆಂಗಳೂರು (ಪಿಟಿಐ): ಪತ್ನಿ ಮೇಲೆ ಹಲ್ಲೆ ಮಾಡಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ಪಿಂಟೋ ಅವರು ದರ್ಶನ್ ಅವರಿಗೆ 25,000 ರೂಪಾಯಿಗಳ ವೈಯಕ್ತಿಕ ಬಾಂಡ್ ನೀಡುವಂತೆ ಹಾಗೂ ಅವರು ಪತ್ನಿ ಸಮೇತರಾಗಿ ಅಕ್ಟೋಬರ್ 13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದರು.
ದಂಪತಿಗಳು ಸಮಾಲೋಚನೆಯ ಮೂಲಕ `ಹೊಂದಾಣಿಕೆಯ ಸಂಬಂಧ~ ಕಾಯ್ದುಕೊಳ್ಳುವ `ಸೂಕ್ತ ತೀರ್ಮಾನಕ್ಕೆ ಬಂದು~ ವಕೀಲರು ಹಾಗೂ ಸರ್ಕಾರಿ ಅಭಿಯೋಜಕ ಅಕ್ಟೋಬರ್ 13ರಂದು ವಕೀಲರ ಸಮೇತ ತಮ್ಮ ಕಚೇರಿಗೆ ಹಾಜರಾಗುವಂತೆ ನ್ಯಾಯಮೂರ್ತಿಗಳು ಹೇಳಿದರು.