ಆದರೆ, ಮಳೆಗಾಲದಲ್ಲಿ ಸೇತುವೆಗೆ ಹೊಂದಿಕೊಂಡಿರುವ ಗುಡ್ಡದಿಂದ ಕಲ್ಲುಗಳು ರಸ್ತೆ ಮೇಲೆ ಬೀಳುತ್ತಿರುವುದರಿಂದ ಪಾದಚಾರಿಗಳು, ವಾಹನ ಸವಾರರು ರಾತ್ರಿ ವೇಳೆ ಆತಂಕದಲ್ಲಿಯೇ ಸೇತುವೆ ದಾಟಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಗಜೇಂದ್ರ ನಾಯ್ಕ ಮಾತನಾಡಿ, ಕಾರವಾರದ ಪ್ರೇಕ್ಷಣೀಯ ಸ್ಥಳಗಳಲ್ಲಿ ಕಾಳಿ ಸೇತುವೆಯೂ ಒಂದು. ಹೀಗಾಗಿ ಇಲ್ಲಿ ವಿಹರಿಸಲು ಪ್ರತಿ ದಿನ ಪ್ರವಾಸಿಗರು ಹಾಗೂ ಸ್ಥಳೀಯರು ಬರುತ್ತಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬೀದಿದೀಪ ಅಳವಡಿಸಬೇಕು ಎಂದು ಆಗ್ರಹಿಸಿದರು.
ರಸ್ತೆ ತಡೆಯಿಂದ ಕೆಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನೂರ್ ಮಹಮ್ಮದ್, ರಾಮಾ ನಾಯ್ಕ, ಬಾಬು ಶೇಖ, ಮಂಜುನಾಥ ನಾಯ್ಕ, ಸಾಯಿನಾಥ ಮೇತ್ರಿ, ಮಾಧವ ಅಸ್ನೋಟಿಕರ, ಗಂಗಾಧರ ಭಟ್, ಸಾಯಿನಾಥ ಹರಿಕಾಂತ, ಆರ್.ಎಸ್. ನಾಯ್ಕ ಮತ್ತಿತರರು ಹಾಜರಿದ್ದರು.