ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿಯಲ್ಲಿ ಮುಳುಗಿ ಮಾಜಿ ಶಾಸಕ ಪುತ್ರ ಸೇರಿ ಇಬ್ಬರ ಸಾವು

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ತಿ.ನರಸೀಪುರ: ನದಿಯಲ್ಲಿ ಈಜಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಿರಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಪ್ರಯೋಗಾಲಯ ಸಹಾಯಕ ದೇವರಾಜು (33) ಹಾಗೂ ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ  ಮಳ್ಳವಳ್ಳಿ ಸಿದ್ಧಾರ್ಥನಗರದ ನಿವಾಸಿ ಮದನ್‌ಲಾಲ್ (33) ಮೃತಪಟ್ಟವರು. ಮದನ್‌ಲಾಲ್ ಅವರು ಮಳವಳ್ಳಿಯ ಮಾಜಿ ಶಾಸಕ ಕೆ.ಎಲ್.ಮರಿಸ್ವಾಮಿ ಹಾಗೂ ಮಳವಳ್ಳಿ ಪುರಸಭೆ ಮಾಜಿ ಅಧ್ಯಕ್ಷೆ ಮಹಾದೇವಮ್ಮ ಅವರ ಪುತ್ರ.

ತಿರಮಕೂಡಲಿನ ಚೌಡೇಶ್ವರಿ ದೇವಾಲಯಕ್ಕೆ ಹರಕೆ ತೀರಿಸಲು ಮಳವಳ್ಳಿಯಿಂದ ಭಕ್ತರೊಬ್ಬರು ಇಲ್ಲಿಗೆ ಬಂದಿದ್ದರು. ಅವರ ಹರಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇವರು ಬಂದಿದ್ದಾಗ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT