ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಅವಧಿಯಲ್ಲಿ ಅಕ್ರಮ ನಡೆದಿಲ್ಲ: ಜಸ್ವಂತ್ ಸಿಂಗ್

Last Updated 2 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ತರಂಗಾಂತರ  ಹಗರಣದಲ್ಲಿ ತಮ್ಮನ್ನು ಸಿಬಿಐ ವಿಚಾರಣೆಗೊಳಪಡಿಸಲು ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್, ತಮ್ಮ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.

ಜಸ್ವಂತ್ ಸಿಂಗ್ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು.

`ನನ್ನ ಅವಧಿಯಲ್ಲಿ ಅಕ್ರಮ ನಡೆದಿಲ್ಲ. ಯಾರಾದರೂ ಉದ್ದೇಶಪೂರ್ವಕವಾಗಿ ಈ ಆರೋಪ ಮಾಡಿದರೆ ನನಗೆ ನೋವಾಗುತ್ತದೆ~ ಎಂದಿರುವ ಜಸ್ವಂತ್, `ವಿಚಾರಣೆಗೊಳಪಡಿಸುವ ಸಂಬಂಧ ನನಗೆ ಸಿಬಿಐನಿಂದ ಅಥವಾ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಅದು ತನ್ನ ಕರ್ತವ್ಯ ಮಾಡುತ್ತಿರುವುದು ಸಂತೋಷದ ವಿಷಯ~ ಎಂದು ಸಂಸತ್ ಭವನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.
 
`ಹಗರಣದ ತನಿಖೆಯ ಭಾಗವಾಗಿ ಜಸ್ವಂತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಗುರುವಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ದಯಾನಿಧಿ ಮಾರನ್ ಹಾಗೂ ಪಿ.ಚಿದಂಬರಂ ಅವರನ್ನು ಪ್ರಶ್ನಿಸದೇ ಸಿಬಿಐ ತಾರತಮ್ಯ ಮಾಡುತ್ತಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ `ಪ್ರಭಾವಿ ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಹೇಳಲಾಗದು~ ಎನ್ನುವ `ರಾಮಚರಿತ ಮಾನಸ~ ಗ್ರಂಥದ ಸಾಲುಗಳನ್ನು ಅವರು ಉದಾಹರಿಸಿದರು.

`2ಜಿ ಹಗರಣವು ಎನ್‌ಡಿಎ ಆಳ್ವಿಕೆಯಲ್ಲಿ ದಿ. ಪ್ರಮೋದ್ ಮಹಾಜನ್ ಹಾಗೂ ಅರುಣ್ ಶೌರಿ ಅವರು ದೂರಸಂಪರ್ಕ ಸಚಿವರಾಗಿದ್ದಾಗ ನಡೆದ ನೀತಿ ಉಲ್ಲಂಘನೆಗೆ ಸಾಕ್ಷಿಯಾಗಿದೆ. ಹಗರಣದ ತನಿಖೆಯ ಭಾಗವಾಗಿ ಆಗಿನ ಹಣಕಾಸು ಸಚಿವ ಜಸ್ವಂತ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT