ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಸಿ.ಎಂ. ಆಗಲಿ ಎಂಬುದು ಜನರ ಅಪೇಕ್ಷೆ: ಬಿಎಸ್‌ವೈ

Last Updated 17 ಜನವರಿ 2012, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ನಾನು ಮತ್ತೆ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬುದು ಜನತೆಯ ಅಪೇಕ್ಷೆಯಾಗಿದೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಅವರು ಮಂಗಳವಾರ ಬೀಳಗಿ ತಾಲ್ಲೂಕಿನ ಗಲಗಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಪಕ್ಷದ ವರಿಷ್ಠರು ಹೇಳಿದಾಗ ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ~ ಎಂದು ತಿಳಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಿಂದ ಮತ್ತು ಪಕ್ಷ ಸಂಘಟನೆಯ ಉದ್ದೇಶದಿಂದ ರಾಜ್ಯದ ಎಲ್ಲ 224 ವಿಧಾನಸಭಾಕ್ಷೇತ್ರದಲ್ಲಿ ತಾವು ಪ್ರವಾಸ ಮಾಡುವುದಾಗಿ ಹೇಳಿದರು.

ನೆಮ್ಮದಿ ಇರಲಿಲ್ಲ: ಬಳಿಕ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿಯಾಗಿ ಒಂದು ದಿನ ಕೂಡ ನೆಮ್ಮದಿಯಿಂದ ಇರಲಿಲ್ಲ, ನಮ್ಮ ಪಕ್ಷದವರೇ ಕಿರುಕುಳ ಕೊಟ್ಟರು ಯಾವುದಕ್ಕೂ ಬೆದರಿಲ್ಲ, ಜನಪರ ಕೆಲಸ ಮಾಡಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT