ಶಿವಮೊಗ್ಗ: ಕಾವೇರಿ ನದಿ ಹಂಚಿಕೆ ಕುರಿತ ಸುಪ್ರೀಂ ಕೋರ್ಟ್ನ ಮಧ್ಯಂತರ ಆದೇಶ ರಾಜ್ಯದ ಹಿತಾಸಕ್ತಿಗೆ ವ್ಯತಿರಿಕ್ತವಾಗೆ ಬಂದರೆ ಮುಂದಿನ ಹೋರಾಟದ ರೂಪುರೇಷೆ ಚರ್ಚಿಸಲು ಅ. 9ರಂದು ಪಕ್ಷ ಸಭೆ ಸೇರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
`ರಾಜ್ಯದಲ್ಲಿ ಒಬ್ಬ ಕೆಟ್ಟ ರಾಜ್ಯಪಾಲರಿದ್ದಾರೆ. ಇದನ್ನೇ ಬಳಸಿಕೊಂಡು ಸಂವಿಧಾನ ಬಿಕ್ಕಟ್ಟು ಸೃಷ್ಟಿಸಿ, ಸರ್ಕಾರ ಬೀಳಿಸುತ್ತಾರೆ ಎಂದು ಕೇಂದ್ರದ ಕೆಲ ನಾಯಕರು ಹೇಳಿದ್ದರು. ಅಲ್ಲದೇ, ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ಗೆ ಗೌರವ ಕೊಟ್ಟು ಸ್ವಲ್ಪ ನೀರು ಬಿಟ್ಟಿದ್ದೇವೆ~ ಎಂದರು.