ಕುಲಗುರುಗಳಾದ ಮಡಿವಾಳ ಮಾಚಿದೇವರ ಜಯಂತಿ ನಡೆಸಬೇಕು. ಅವರ ಜನ್ಮ ಸ್ಥಳವಾದ ವಿಜಾಪುರ ಜಿಲ್ಲೆ ಸಿಂದಗಿ ತಾಲ್ಲೂಕು ದೇವರಹಿಪ್ಪರಗಿಯನ್ನು ಅಭಿವೃದ್ಧಿಪಡಿಸಿ, ಜನ್ಮ ಸ್ಥಳ ನಿರ್ವಹಣೆಗೆ ಪ್ರತ್ಯೇಕವಾದ ಮಾಚಿದೇವ ಪ್ರಾಧಿಕಾರ ರಚಿಸಬೇಕು. ಹಾಗೆಯೇ, ಮಡಿವಾಳ ಮಾಚಿದೇವರ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಸಮಾವೇಶದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಈಶ್ವರಪ್ಪ, ಎಸ್.ಜಿ.ನಾಗರಾಜ, ಸಂಘಟನಾ ಕಾರ್ಯದರ್ಶಿಗಳಾದ ಎಚ್.ವಿ.ತಿಮ್ಮಪ್ಪ, ಕುಮಾರ್, ಚನ್ನಬಸಪ್ಪ ಉಪಸ್ಥಿತರಿದ್ದರು.