ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಖಿತಾ ನಿಷೇಧ ಸರಿಯಲ್ಲ: ಶಿವರಾಜ್‌ಕುಮಾರ್

Last Updated 14 ಸೆಪ್ಟೆಂಬರ್ 2011, 19:00 IST
ಅಕ್ಷರ ಗಾತ್ರ

ಮೈಸೂರು: ದರ್ಶನ್ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಚಿತ್ರ ನಟಿ ನಿಖಿತಾ ಅವರಿಗೆ ನಿಷೇಧ ಹೇರಿರುವುದು ಸರಿಯಲ್ಲ, ನಿರ್ಮಾಪಕರ ಸಂಘದವರು ನಿಷೇಧ ಹೇರುವ ಮೊದಲು ಯೋಚನೆ ಮಾಡಬೇಕಾಗಿತ್ತು ಎಂದು ಚಿತ್ರ ನಟ ಶಿವರಾಜ್‌ಕುಮಾರ್ ಬುಧವಾರ ಇಲ್ಲಿ ಅಭಿಪ್ರಾಯಪಟ್ಟರು.

ಪತ್ರಕರ್ತರೊಂದಿಗೆ ಮತನಾಡಿದ ಅವರು `ಇದೊಂದು ಆತುರದ ನಿರ್ಧಾರ. ಏನೇ ತಪ್ಪು ಮಾಡಿದರೂ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ನಿರ್ಮಾಪಕರ ಸಂಘ ಈ ವಿಷಯದಲ್ಲಿ ಎಡವಿದೆ~ ಎಂದರು.
 
ದರ್ಶನ್ ವರ್ತನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಶಿವರಾಜ್‌ಕುಮಾರ್ ದರ್ಶನ್ ಕುಟುಂಬ ಚೆನ್ನಾಗಿರಲಿ ಎಂದಷ್ಟೇ ಹೇಳಿದರು.

ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ವಿದೇಶ ಪ್ರವಾಸದಲ್ಲಿದ್ದು, ಅವರು ಬಂದ ನಂತರ ಕಲಾವಿದರು ಒಂದೆಡೆ ಸೇರಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT