ಭೈರಪ್ಪನವರಿಗೆ ಜ್ಞಾನಪೀಠ ಪ್ರಶಸ್ತಿ ಬರಲಾರದು ಎಂದು ವಶೀಲಿ ಮಾಡಿದವರಂತೆ ಮಾತನಾಡಿದ ವೀರಭದ್ರ ಚನ್ನಮಲ್ಲ ಸ್ವಾಮೀಜಿಯವರು, ಭೈರಪ್ಪನವರಿಗೆ ಜ್ಞಾನಪೀಠ ಬರುವುದಾದರೆ, ಮರಣೋತ್ತರವಾಗಿ ಬರಲಿ ಎಂದು ಅಪ್ಪಣೆ ಕೊಡಿಸಿದ್ದಾರೆ. ಈ ಮೂಲಕ ತಮ್ಮ ಕ್ರೂರ ಮನಸ್ಸನ್ನು ಹರಿಯಬಿಟ್ಟು ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿದುಕೊಂಡಿದ್ದಾರೆ. ಈ ಬಗ್ಗೆ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು.