ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಗಮನದ ಬೆನ್ನಲ್ಲೇ ದಾಳಿ

Last Updated 24 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಆರಂಭಿಸುವಾಗ ಈಶ್ವರಪ್ಪ ಮನೆಯಲ್ಲಿ ಇರಲಿಲ್ಲ. ಸ್ವಲ್ಪ ಮೊದಲು (ಸೋಮವಾರ ಬೆಳಿಗ್ಗೆಯೇ) ಅವರು ಕೊಪ್ಪಳಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ಮನೆಯಿಂದ ನಿರ್ಗಮಿಸಿದ ಅರ್ಧ ಗಂಟೆಯಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.

ಈಶ್ವರಪ್ಪ ಅವರ ಪತ್ನಿ ಜಯಲಕ್ಷ್ಮಿ ಯೋಗ ತರಗತಿಗೆ ಹೋಗಿದ್ದರು. 8.15ರ ವೇಳೆಗೆ ಅವರು ಮನೆಗೆ ಹಿಂದಿರುಗಿದರು.
ಈಶ್ವರಪ್ಪ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಅವರ ನಿವಾಸದತ್ತ ದೌಡಾಯಿಸಿದ ಅವರ ಬೆಂಬಲಿಗರು,  ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೀರ್ಘಕಾಲ ಅಲ್ಲಿ ನಿಂತು ಕುತೂಹಲದಿಂದ ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT