ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ದೇಶಕ ಭಗವಾನ್‌ಗೆ ಸನ್ಮಾನ

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಸರ್ವಜ್ಞ ಕನ್ನಡದ ಜನ ಸಾಮಾನ್ಯರ ಕವಿಯಾಗಿದ್ದವನು. ಸರ್ವಜ್ಞನ ವಚನಗಳು ಸಮಾಜಕ್ಕೆ ದಾರಿ ದೀಪವಾಗಿರುವಂತವು~ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಹೇಳಿದರು.

ಇತ್ತೀಚೆಗೆ ಶ್ರೀ ರಾಮಪುರದ ಸರ್ವಜ್ಞ ಮಿತ್ರ ವೃಂದದ 39 ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರಾಂತಿ ಕವಿ ಸರ್ವಜ್ಞ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

  ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಚಲನಚಿತ್ರ ನಿರ್ದೇಶಕ ಭಗವಾನ್, `ಸರ್ವಜ್ಞಮೂರ್ತಿ ಚಲನಚಿತ್ರವನ್ನು 60ರ ದಶಕದಲ್ಲಿ ಬಹಳ ನಿರೀಕ್ಷೆಯಿಂದ ನಿರ್ಮಿಸಲಾಯಿತು. ರಾಜಕುಮಾರ್ ಹಾಗೂ ಹರಿಣಿ ಅಭಿನಯಿಸಿದ್ದ ಚಿತ್ರ ಚೆನ್ನಾಗಿ ಮೂಡಿ ಬಂದರೂ ಯಶಸ್ಸು ಕಾಣಲಿಲ್ಲ~ ಎಂದರು.

ಕಾರ್ಯಕ್ರಮದಲ್ಲಿ ಗಾಂಧಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್, ಸರ್ವಜ್ಞ ಮಿತ್ರ ವೃಂದದ ಅಧ್ಯಕ್ಷ ಕೆ.ಅಶೋಕ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT